Friday, July 2, 2010

ಕಲೆ ವಿಲಾಸಕ್ಕಲ್ಲ, ವಿಕಾಸಕ್ಕಾಗಿ...

ಆತ ಕಲೆಗಾರ.
ತನ್ನ ಪುಟ್ಟ ಸ್ಟುಡಿಯೋದಲ್ಲಿ ಕುಳಿತ ಆತನಿಗೆ ಆತನದೇ ಲೋಕ. ಆ ಬಣ್ಣದ ಪೆನ್ನುಗಳು, ಒಂದಷ್ಟು
ಬ್ರಶ್‌ಗಳು, ಹಾಳೆಗಳು, ತಂತಿಗಳು, ಮರಳಿನ ಹುಡಿ...ಈ ಎಲ್ಲವುಗಳ ನಡುವೆ ಕುಳಿತ ಆತ ಕಲೆಗಾರ. ಮಾತೆತ್ತಿದ್ದರೆ 'ಕಲೆ ವಿಲಾಸಕ್ಕಲ್ಲ, ವಿಕಾಸಕ್ಕಾಗಿ' ಟಾಲ್‌ಸ್ಟಾಯ್ ಹೇಳಿರುವ ಮುತ್ತಿನ ಮಾತುಗಳು ಅವರ ಬಾಯಿಂದ ಉದುರುತ್ತವೆ. ಜೊತೆಗೆ 'ಕಲೆ ಹೃದಯದ ಭಾಷೆ. ಅದಿರುವುದು ಮನುಷ್ಯನನ್ನು ಶುದ್ಧಮಾಡುವುದಕ್ಕಾಗಿ. ತಮ್ಮ ಅನುಭವ, ಭಾವಗಳನ್ನು ಚಿತ್ರದ ಮೂಲಕ ವ್ಯಕ್ತಿಪಡಿಸಬೇಕು. ಆಗ ಅಲ್ಲಿ ತಮ್ಮತನ ಅಭಿವ್ಯಕ್ತಿಗೊಳ್ಳುತ್ತೆ'' ಎಂದು ಕಲೆಗೆ ತಮ್ಮದೇ ವ್ಯಾಖ್ಯಾನ ನೀಡುತ್ತಾರೆ.

ಇವರೇ ರಾಘವೇಂದ್ರ ಹೆಗಡೆ.
ಹುಟ್ಟಿದ್ದು ಶಿರಸಿಯ ಕೃಷಿ ಕುಟುಂಬವೊಂದರಲ್ಲಿ. ಗಜಾನನ ಹೆಗಡೆ ಮತ್ತು ಯಮುನಾ ಹೆಗಡೆ ಇವರ ಅಪ್ಪ-ಅಮ್ಮ. ಬಾಲ್ಯದಲ್ಲಿ ಕಲೆ ಏನೆಂದು ಗೊತ್ತಿಲ್ಲದಿದ್ದರೂ ಸುಂದರವಾದ ಚಿತ್ರಗಳನ್ನು ಕಂಡಾಗ ಕುತೂಹಲಗೊಂಡಿದ್ದು, ಸಂಭ್ರಮದಿಂದ ಕೇಕೆ ಹಾಕಿದ್ದು ನಿಜ. ಅಂಥ ಹುಡುಗನ ಚಿತ್ರ ನೋಡಿ ರಾಷ್ಟ್ರಪತಿಯಾಗಿದ್ದ ಅಬ್ಧುಲ್ ಕಲಾಂ ಅವರೇ ಖುಷಿಪಟ್ಟಿದ್ದರು. ಅಷ್ಟೇ ಅಲ್ಲ, ಇವರು ಬಿಡಿಸಿದ ಚಿತ್ರವನ್ನು ತಾನೇ ಸ್ವತಃ ಕೊಂಡೊಯ್ದು ರಾಷ್ಟ್ರಪತಿ ಭವನದಲ್ಲಿರುವ ಮ್ಯೂಸಿಯಂನಲ್ಲಿ ಇಟ್ಟಿದ್ದಾರೆ. ಹಲವಾರು ಪ್ರಸಿದ್ಧ ಕಲಾವಿದರ ಚಿತ್ರ ಸಂಗ್ರಹದ ಜೊತೆಗೆ ಕನ್ನಡದ ಯುವಕನೊಬ್ಬನ ಚಿತ್ರ ಇಂದು ರಾಷ್ಟ್ರಪತಿ ಭವನದಲ್ಲಿದೆ ಕನ್ನಡಿಗರಿಗೂ ಹೆಮ್ಮೆ,

ಕಲ್ಲು, ಮರ, ಮಣ್ಣು, ಲೋಹ ಎಲ್ಲವೂ ಇವರ ಕೈಯಲ್ಲಿ ಕಲಾಕೃತಿಗಳಾಗುತ್ತವೆ. ಸೊಳ್ಳೆ ಪರದೆಯಂಥ ಸಣ್ಣ ತಂತಿಗಳನ್ನು ಬಳಸಿ, ಅವುಗಳಿಂದ ವೈವಿಧ್ಯಮಯ ಕಲಾಕೃತಿಗಳನ್ನು ಬಿಡಿಸುವ ಇವರ ಕಲಾಪ್ರತಿಭೆ ಅದ್ಭುತ. ರಷ್ಯಾ ಮತ್ತು ಇಂಗ್ಲೆಂಡ್‌ನ ಇಬ್ಬರು ಕಲಾವಿದರನ್ನು ಹೊರತುಪಡಿಸಿದರೆ ನಮ್ಮ ದೇಶದ ಕಲಾಪ್ರತಿಭೆ ಎಂದರೆ ಅದು ರಾಘವೇಂದ್ರ ಹೆಗಡೆಯವರೊಬ್ಬರೇ. ಹಾಗೇ ಮರಳ ಮೇಲೆ ಕಲಾಕೃತಿ ಬಿಡಿಸುವ ಕಲೆ ಇನ್ನೂ ಚೆನ್ನ.

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂಥ ಅಪರೂಪದ ಕಾರ್ಯಕ್ರಮ ಆಯೋಜಿಸಿದ್ದರು. ಹಾಡುಗಾರರು ಹಾಡುತ್ತಾ ಇದ್ದರೆ, ಇತ್ತ ಗಾಜಿನ ಮೇಲೆ ಹರಡಿರುವ ಮರಳ ಮೇಲೆ ತನ್ನ ಬೆರಳುಗಳಿಂದಲೇ ಹಾಡಿಗೆ ಜೀವ ತುಂಬುತ್ತಿದ್ದರು. ಈ ಕಲೆ ಇಂಗ್ಲೆಂಡ್‌ನಲ್ಲಿ ಹೊರತುಪಡಿಸಿದರೆ ಬೇರೆಲ್ಲೂ ಇಲ್ಲ. ಇದೀಗ ಇಂಥ ಅದ್ಭುತ ಕಲೆಯನ್ನು ದೇಶಕ್ಕೆ ಪರಿಚಯಿಸಿದ ಕೀರ್ತಿ ರಾಘವೇಂದ್ರ ಅವರಿಗೆ ಸಲ್ಲುತ್ತದೆ.




"ನಮ್ಮ ಕಲೆಗಳು ಯಾವುದೋ ಮಾಲ್‌ಗಳಿಗೆ, ಪ್ರದರ್ಶನಗಳಿಗೆ, ಶೋಕೇಸ್‌ಗೆ ಸೀಮಿತವಾಗಬಾರದು. ಜನರ ಮುಂದೆ ಕಲೆ ಹೋಗಬೇಕು. ಆಗ ಜನ ನಮ್ಮನ್ನು ಗುರುತಿಸುತ್ತಾರೆ. ನನ್ನ ಭಾವಾಭಿವ್ಯಕ್ತಿ ಜನಸಾಮಾನ್ಯನ ಮುಂದೆ ಹೋಗಬೇಕೆನ್ನುವುದೇ ನನ್ನಾಸೆ’ ಎನ್ನುವ ರಾಘವೇಂದ್ರ ಅವರು ಕೇವಲ ಚಿತ್ರಕಲಾವಿದರು ಮಾತ್ರವಲ್ಲ, ಅವರ ಕ್ಷೇತ್ರಗಳು ಇನ್ನೂ ವಿಶಾಲ. ಮಂದ್ರಾ, ಗಂಗಾವತರಣ, ಇಡಿಪಸ್, ಮುದ್ರಾ ರಾಕ್ಷಸ ಮುಂತಾದ ನಾಟಕಗಳಿಗೆ ಕಲಾನಿರ್ದೇಶಕನಾಗಿ ಹಾಗೂ ಮೈಸೂರು ಮಲ್ಲಿಗೆ ಸೇರಿದಂತೆ ಹಲವಾರು ನಾಟಕಗಳಲ್ಲಿ ಅಭಿನಯಿಸಿರುವ ರಾಘವೇಂದ್ರ ಅವರು, ಬೆಂಗಳೂರಿನ ಹಲವಾರು ಕಾಲೇಜುಗಳಲ್ಲಿ ಕಲೆಯ ಕುರಿತಾದ ಬೋಧನೆಗೆ 'ಅತಿಥಿ ಉಪನ್ಯಾಸಕನಾಗಿ'ಯೂ ಕಾರ್ಯನಿರ್ವಹಿಸುತ್ತಿದ್ದಾರೆ.


ಇವರ ಯಾವುದೇ ಕಲಾಕೃತಿಗಳನ್ನು ನೋಡಿದರೂ ಅಲ್ಲಿ "ದೇಸಿತನ'' ಎದ್ದು ಕಾಣುತ್ತದೆ. ಭಾರತೀಯತೆ, ನಮ್ಮ ಸಂಸ್ಕಾರ, ಸಂಸ್ಕೃತಿ...ಇಂಥ ವಿಚಾರಗಳ ಕುರಿತಾಗೇ ಮಾತಿಗಿಳಿಯುವ ರಾಘವೇಂದ್ರ, ಒಂದು ಕ್ಷಣ ಕಲಾವಿದನಾಗಿಯೂ, ಮಗದೊಂದು ಕ್ಷಣ ಚಿಂತನಕಾರನಾಗಿಯೂ ಅಚ್ಚರಿಗೊಳಿಸುತ್ತಾರೆ. ಓರ್ವ ಎಂಜಿನಿಯರ್ ಅಥವಾ ವೈದ್ಯನಾದರೆ ಅವರು ಸಂತೋಷಗೊಳಿಸದೆಯೇ ದುಡ್ಡು ಮಾಡಬಹುದು, ಆದರೆ ತಾನೂ ಸಂತೋಷಗೊಳ್ಳುತ್ತಾ, ಇತರರನ್ನೂ ಸಂತೋಷಗೊಳಿಸುವುದು ಕಲೆ ಮಾತ್ರ ಎನ್ನುವ ರಾಘವೇಂದ್ರ ಅವರು ಜನಸಾಮಾನ್ಯರೂ ಸಂಭ್ರಮಿಸುವ ಉತ್ತಮ ಕಲಾವಿದರಾಗಲಿ ಎಂದು ಹಾರೈಸೋಣ.
****
ಒಂದೆಡೆ ಹಾಡುಗಾರರು ಹಾಡುತ್ತಿದ್ದರೆ, ಇತ್ತ ಕಲಾವಿದರೊಬ್ಬರು ಹಾಡಿನ ಭಾವವನ್ನು ಮರಳಿನ ಮೇಲೆ ಚಿತ್ರಗಳಲ್ಲೇ ನಿರೂಪಿಸುತ್ತಾರೆ. ಈ ಕಲೆ ರಾಘವೇಂದ್ರ ಅವರಿಗೆ ಕರಗತ. ಈ ಮೂಲಕ ದೇಶದಲ್ಲೇ ಮೊದಲ ಬಾರಿಗೆ "ಮರಳ ಕಲೆ" ಯನ್ನು ರಾಘವೇಂದ್ರ ಪರಿಚಯಿಸಿದ್ದಾರೆ(ಬೇರೆಲ್ಲೂ ಕೇಳಿಲ್ಲ) ಇವರ ಅದ್ಭುತ ಕಲಾ ಪ್ರತಿಭೆಯನ್ನು ಕಂಡು ಅಂದು ರಾಷ್ಟ್ರಪತಿಯಾಗಿದ್ದ ಅಬ್ಧುಲ್ ಕಲಾಂ ಅವರೇ ಬೆನ್ನು ತಟ್ಟಿದ್ದಾರೆ. ಇವರು ಬಿಡಿಸಿದ ಚಿತ್ರ ಇಂದು ರಾಷ್ಟ್ರಪತಿ ಭವನದ ಮ್ಯೂಸಿಯಂನಲ್ಲಿದೆ.

ಇಲ್ಲೂ ಓದಬಹುದು: http://hosadigantha.in/epaper.php?date=07-03-2010&name=07-03-2010-15

12 comments:

sunaath said...

ಚಿತ್ರಾ,
ನಿಮ್ಮ blog ಮೂಲಕ ಒಬ್ಬ ಅದ್ಭುತ ಕಲಾಕಾರರ ಪರಿಚಯ ಮಾಡಿಕೊಟ್ಟಿದ್ದೀರಿ. ಅವರ ಚಿತ್ರಗಳನ್ನು ನೋಡಿ ಖುಶಿಯಾಯಿತು. ಧನ್ಯವಾದಗಳು.

ಮನದಾಳದಿಂದ............ said...

ಈಗ ತಾನೇ TV9 ಚಾನೆಲ್ಲಿನಲ್ಲಿ ರಾಘವೇಂದ್ರ ಹೆಗಡೆಯವರ ಕಲಾ ವೈಭವವನ್ನು ವೀಕ್ಷಿಸಿದ್ದೆ. ನಿಜಕ್ಕೂ ಅದ್ಭುತ ಕಲಾವಿದನಾತ!
ಅಂತಹ ಕಲಾವಿದನೊಬ್ಬನ ಬಗ್ಗೆ ಬರೆದ ನಿಮಗೆ ಧನ್ಯವಾದಗಳು.

Dr.D.T.Krishna Murthy. said...

ಒಳ್ಳೆಯ ಕಲಾವಿದರ ಪರಿಚಯ ಮಾಡಿಕೊಟ್ಟಿದ್ದಕ್ಕೆ ಧನ್ಯವಾದಗಳು.

ಮನಸು said...

tumba oLLe kalaavidaru ivara bagge tiLididde.... mattaShTu vichara tiLisiddakke dhanyavadagaLu

ಸಾಗರದಾಚೆಯ ಇಂಚರ said...

Amazing

nice one Dharitri

ಬಾಲು said...

ಒಳ್ಳೆಯ ಪರಿಚಯ.

Guruprasad said...

ಒಳ್ಳೆಯ ಕಲಾಗಾರರನ್ನು ಪರಿಚಯಿಸಿದ್ದಿರ... ಧನ್ಯವಾದಗಳು.....

ಸೀತಾರಾಮ. ಕೆ. / SITARAM.K said...

ಅದ್ಭುತ ಕಲಾವಿದರ ಪರಿಚಯ ಮಾಡಿ ಕೊಟ್ಟಿದ್ದಕ್ಕೆ ಧನ್ಯವಾದಗಳು.

ರಾಘವೇಂದ್ರ ಹೆಗಡೆ- ಸಕಲ ಸ್ಟುಡಿಯೋ. said...

pratikri neediru ella bandugaligU dhanyavaadagalu.
dharitriyavarige visheshavaada dhanyavaada

ಶಿವಪ್ರಕಾಶ್ said...

olleya kalavidanaannu parichayisiddakke dhanyavaadagalu :)

ಜಲನಯನ said...

ಚಿತ್ರ...ಕಲಾವಿದನ ಕಲಾವಂತಿಕೆಯಂತೆಯೇ ಕಲಾವಿದನ ಪರಿಚಯವೂ ಮುಖ್ಯ ಎಂದು ನಂಬಿರುವ ನನಗೆ ಒಬ್ಬ ಪ್ರತಿಭಾವಂತ ಕಲಾವಿದನ ಪರಿಚಯಮಾಡಿಕೊಟ್ಟುದ್ದಕ್ಕಾಗಿ ಧನ್ಯವಾದಗಳು. ಅಂದಹಾಗೆ...ದಾರಿ ಮರೆತಂತೆ ಕಾಣುತ್ತೆ....ನೆನಪಿಸಲೇ....??
http://www.jalanayana.blogspot.com

Unknown said...

innoo eshto vishayagalannu bareyabahudu ivara bagge. aadare bareyuvudoo ondu kale mattadu nanninda swalpa doora:-) adare avara studio omme nodabekadde. innondu vishaya, dr ganeshara ashtavadhanagalalloo sakriyavaagi palgolluttare ivaru. idenoo sadharana vishayavalla! ivaru nammallobbaru ennuvudu bala khushiya vichara